Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:48 - ಕನ್ನಡ ಸಮಕಾಲಿಕ ಅನುವಾದ

48 ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತೆನಿ ಮಾಜಿ ಎಗ್ದಮ್ ಕಿಳ್ ಗುಲಾಮಾಚಿ ಯಾದ್ ಕರ್‍ಲ್ಯಾನ್! ಹೆಚೆನ್ ಫಿಡೆ ಸಗ್ಳಿ ಲೊಕಾ ಮಾಕಾ ಎಕ್ ಬರೆ ಭಾಗ್ ಗಾವಲ್ಲಿ ಮನುನ್ ಬಲ್ವುತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:48
19 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.


“ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.


ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!


ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.


ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.


ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.


ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು