Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:68 - ಕನ್ನಡ ಸಮಕಾಲಿಕ ಅನುವಾದ

68 “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68-70 ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 ಇಸ್ರಾಯೆಲಾಚ್ಯಾ ದೆವಾಚಿ ಸರ್ವೆಸ್ವರಾಚಿ ಸ್ತುತಿ ಕರುವಾ! ತೊ ಅಪ್ನಾಚ್ಯಾ ಲೊಕಾಂಚ್ಯಾ ಆದಾರಾಕ್ ಯೆಲೊ, ಅನಿ ತೆಂಕಾ ಸ್ವತಂತ್ರ್ ಕರುಕ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:68
24 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.


ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,


ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.


ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ


ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು