Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:8 - ಕನ್ನಡ ಸಮಕಾಲಿಕ ಅನುವಾದ

8 ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದು ದಿನ ಜಕರೀಯನ ವರ್ಗದ ಸರದಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲಾಗಿ ಜಕರೀಯನ ವರ್ಗದ ಸರತಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎಕ್ ದಿಸ್ ಅಪ್ನಾಚಿ ಪಾಳಿ ಯೆಲ್ಲ್ಯಾ ತನ್ನಾ ಜೆಕರಿಯಾ ದೆವಾಚ್ಯಾ ಗುಡಿತ್ ಅಪ್ನಾಚೆ ಯಾಜಕಾಚೆ ಕಾಮ್ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:8
16 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.


ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.


ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.


ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.


ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.


ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


“ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.


“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,


ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.


ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು