Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:15 - ಕನ್ನಡ ಸಮಕಾಲಿಕ ಅನುವಾದ

15 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತಿಯಾ ಕಪರ್‍ನವ್! ತುಕಾ ಸರ್‍ಗಾ ಪತರ್ ವೈರ್ ಪಾವುಕ್ ಪಾಜೆ ನ್ಹಯ್? ತುಕಾ ನರ್‍ಕಾತ್ ಟಾಕುನ್ ಹೊತಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:15
20 ತಿಳಿವುಗಳ ಹೋಲಿಕೆ  

ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.


ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ.


“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.


“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.


ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.


ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.


ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು