Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:20 - ಕನ್ನಡ ಸಮಕಾಲಿಕ ಅನುವಾದ

20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ಗಿರೆ ತುಮಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಕುಶಿ ಹೊವ್‍ನಕಾಶಿ; ಸರ್‍ಗಾತ್ ತುಮ್ಚೆ ನಾವ್ ಲಿವಲ್ಲೆ ಹಾಯ್ ಮನುನ್ ಕುಶಿ ಹೊವಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:20
19 ತಿಳಿವುಗಳ ಹೋಲಿಕೆ  

ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.


ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು