Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:21 - ಕನ್ನಡ ಸಮಕಾಲಿಕ ಅನುವಾದ

21 ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಎಗ್ದಾ ಜೆಜು ಪವಿತ್ರ್ ಆತ್ಮ್ಯಾನ್ ಕುಶಿ ಹೊಲೊ ಅನಿ “ಬಾಬಾ ಸರ್‍ಗಾಚ್ಯಾ ಅನಿ ಹ್ಯಾ ಜಗಾಚ್ಯಾ ಧನಿಯಾ ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಬುದ್ವಂತಾನಿಕ್ನಾ ಅನಿ ಶಿಕಲ್ಲ್ಯಾನಿಕ್ನಾ ನಿಪ್ವುನ್ ಥವಲ್ಲೆ, ಶಿಕುನಸಲ್ಲ್ಯಾಕ್ನಿ ತಿಯಾ ದಾಕ್ವುನ್ ದಿಲೆ. ಹೊಯ್ ಮಾಜ್ಯಾ ಬಾಬಾ, ಹೆ, ತುಕಾ ಕಶೆ ಪಾಜೆ ತಸೆಚ್ ಹೊಲೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:21
29 ತಿಳಿವುಗಳ ಹೋಲಿಕೆ  

ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.


ಅವಳು ಅದನ್ನು ಕಂಡುಕೊಂಡ ಮೇಲೆ, ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ಅವರಿಗೆ, ‘ಕಳೆದುಹೋದ ನಾಣ್ಯವು ಸಿಕ್ಕಿತು; ನನ್ನ ಸಂಗಡ ಸಂತೋಷಪಡಿರಿ,’ ಎನ್ನುವಳು.


ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು,


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”


ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು