Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:4 - ಕನ್ನಡ ಸಮಕಾಲಿಕ ಅನುವಾದ

4 ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೈಚೀಲವನ್ನಾಗಲಿ ಹಣವನ್ನಾಗಲಿ ಅಥವಾ ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ನಿಂತುಕೊಂಡು ಜನರೊಡನೆ ಮಾತನಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:4
13 ತಿಳಿವುಗಳ ಹೋಲಿಕೆ  

ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.


ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.


ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.


ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,


ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.


ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.


ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವುದಿಲ್ಲ,” ಎಂದನು. ಅದಕ್ಕೆ ಲಾಬಾನನು, “ಹೇಳು,” ಎಂದನು.


ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು