Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:13 - ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬುರ್ಶೆ ತುಮಿ, ತುಮ್ಕಾ ಗೊತ್ತ್ ಹಾಯ್,ಪೊರಾಕ್ನಿ ದಿವ್ಕ್ ಖಲೆ ಬರೆ ಮನುನ್ ಅನಿ ಖಲೆ ಪೊರಾಕ್ನಿ ದಿವ್ಚೆ ಮನುನ್, ತರ್, ಸರ್‍ಗಾ ವೈಲೊ ಪವಿತ್ರ್ ಬಾಬಾ, ಅಪ್ನಾಕ್ಡೆ ಮಾಗ್ತಲ್ಯಾಕ್ನಿ ಕವ್ಡ್ಯಾ ಮಾಪಾನ್ ಅಪ್ನಾಚೊ ಪವಿತ್ರ್ ಆತ್ಮೊ ದಿಯ್ಲ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:13
30 ತಿಳಿವುಗಳ ಹೋಲಿಕೆ  

ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.


ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.


ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ?


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು