Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:53 - ಕನ್ನಡ ಸಮಕಾಲಿಕ ಅನುವಾದ

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ಜೆಜು ತೊ ಜಾಗೊ ಸೊಡುನ್ ಗೆಲ್ಲ್ಯಾ ತನ್ನಾ, ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲೆ ಗಾವ್ತಾ ತೆಸೆ ಬೊಲುನ್ಗೆತ್, ಅನಿ ಜೆಜುಚ್ಯಾ ವಿಶಯಾತ್ ಎಕಾಮೆಕಾಕ್ ಪರಸ್ನೆ ಇಚಾರುನ್ಗೆತ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:53
11 ತಿಳಿವುಗಳ ಹೋಲಿಕೆ  

ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,


ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,


ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.


ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು