Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಐಶ್ವರ್ಯವಂತನು, ‘ನಾನೇನು ಮಾಡಲಿ? ನನ್ನ ಬೆಳೆಯನ್ನೆಲ್ಲಾ ತುಂಬಿಡಲು ನನಗೆ ಸ್ಥಳವಿಲ್ಲವಲ್ಲಾ!’ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ “ಮಿಯಾ ಮಾಜೆ ಪಿಕ್ ಖೈ ಭರುನ್ ಥವ್ಚೆ? ಮಿಯಾ ಕಾಯ್ ಕರುಚೆ?” ಮನುನ್ ಯವ್ಜುಕ್‍ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:17
23 ತಿಳಿವುಗಳ ಹೋಲಿಕೆ  

ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.


ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.


“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


“ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.


ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.


ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.


ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.


ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.


ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.


“ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು