Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:58 - ಕನ್ನಡ ಸಮಕಾಲಿಕ ಅನುವಾದ

58 ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ನೀನು ಪ್ರತಿವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಮುಂದಕ್ಕೆ ಹೋಗುತ್ತಿರುವಾಗ ದಾರಿಯಲ್ಲಿಯೇ ತಂಟೆಹರಿಸಿಕೊಳ್ಳಲು ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು; ನ್ಯಾಯಾಧಿಪತಿಯು ನಿನ್ನನ್ನು ಸೆರೇಯಜಮಾನನ ವಶಕ್ಕೆ ಒಪ್ಪಿಸಾನು; ಸೆರೇಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಒಬ್ಬನು ನಿಮ್ಮ ಮೇಲೆ ದಾವೆ ಹೂಡಲು ನ್ಯಾಯಾಲಯಕ್ಕೆ ಹೋಗುತ್ತಿರುವಾಗ ನಿಮ್ಮ ಸಮಸ್ಯೆಯನ್ನು ದಾರಿಯಲ್ಲಿಯೇ ಪರಿಹರಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ಇಲ್ಲವಾದರೆ, ಅವನು ನಿಮ್ಮನ್ನು ನ್ಯಾಯಾಧೀಶನ ಬಳಿಗೆ ಕೊಂಡೊಯ್ಯುವನು. ನ್ಯಾಯಾಧೀಶನು ನಿಮ್ಮನ್ನು ಸೆರೆಮನೆಗೆ ಹಾಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ಕೊನ್ಬಿ ಎಕ್ಲೊ ತುಮ್ಚೆ ವರ್‍ತಿ ಪಿರ್ಯಾದ್ ಘಾಲುನ್ ತುಮ್ಕಾ ನ್ಯಾಯ್ ನಿರ್‍ನಯ್‍ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜಾತಾ ಜಾಲ್ಯಾರ್, ತೆನಿ ತುಮ್ಕಾ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚೆಕ್ಡೆ ರಾಜಿ-ಕುಸಿ-ಹೊವಾ, ಜರ್ ತುಮಿ ಅಶೆ ಕರುಕ್ನ್ಯಾಶಿ, ತರ್ ತೊ ತುಮ್ಕಾ ನ್ಯಾಯ್ ದಿತಲ್ಯಾಚ್ಯಾ ತಾಬೆತ್ ದಿತಾ,ಅನಿ ನ್ಯಾಯ್‍ ನಿರ್‍ನಯ್ ಕರ್‍ತಲೊ, ತುಮ್ಕಾ ಪೊಲಿಸಾಂಚ್ಯಾ ಹಾತಿತ್ ದಿತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:58
20 ತಿಳಿವುಗಳ ಹೋಲಿಕೆ  

“ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.


ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.


ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.


ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.


“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.


ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.


ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.


ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು