Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:15 - ಕನ್ನಡ ಸಮಕಾಲಿಕ ಅನುವಾದ

15 ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾನ್ ತೆಕಾ “ತುಮಿ ಕುಸ್ಡ್ಯಾನೊ! ತುಮ್ಚ್ಯಾತ್ಲೊ ಕೊನ್ಬಿ ಸಬ್ಬತಾಚ್ಯಾ ದಿಸಿ,ತುಮ್ಚ್ಯಾ ಗಾಡ್ವಾಕ್ ನಾಹೊಲ್ಯಾರ್, ಬೈಲಾಕ್ ಗೊಟ್ಯಾತ್ನಾ ಸೊಡ್ವುನ್ ಪಾನಿಯಾಕ್ ನ್ಹೆಯ್‌ನ್ಯಾಶಿ ಕಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:15
16 ತಿಳಿವುಗಳ ಹೋಲಿಕೆ  

ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.


ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:


ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.


ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.


ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”


ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.


ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು