Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:19 - ಕನ್ನಡ ಸಮಕಾಲಿಕ ಅನುವಾದ

19 ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆ ಕಶೆ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ, ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ, ತೆ ಝಾಡ್ ಮೊಟೆ ಹೊತಾ, ಅನಿ ಮೊಟೆ ಝಾಡ್ ಹೊತಾ, ಅನಿ ಫಾಂಕ್ರಾ ಯೆವ್ನ್ ತೆಚ್ಯಾ ಟಾಳಿಯಾಕ್ನಿ ಘಂಟೆ ಭಾಂದ್ತ್ಯಾತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:19
38 ತಿಳಿವುಗಳ ಹೋಲಿಕೆ  

ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.


ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.


ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.


ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.


ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!


ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.


ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.


ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.


ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು