Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:24 - ಕನ್ನಡ ಸಮಕಾಲಿಕ ಅನುವಾದ

24 “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಅವರಿಗೆ - ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗುವದಕ್ಕೆ ಹೆಣಗಾಡಿರಿ. ಬಹುಜನ ಒಳಕ್ಕೆ ಹೋಗುವದಕ್ಕೆ ನೋಡುವರು, ಆದರೆ ಅವರಿಂದಾಗುವದಿಲ್ಲ ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಬಾರಿಕ್ಲ್ಯಾ ದಾರಾತ್ನಾ ಭುತ್ತುರ್ ಗುಸುಕ್ ಖಟ್ಪಟ್ ಕರಾ; ಕಶ್ಯಾಕ್ ಮಟ್ಲ್ಯಾರ್, ಲೈ ಲೊಕಾ ತ್ಯಾತುರ್ ಗುಸುಕ್ ಕಸ್‍ರತ್ ಕರ್‍ತ್ಯಾತ್, ಖರೆ ತೆಂಕಾ ಗುಸುಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:24
26 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.


ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.


ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.


“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,


ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.


ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು