Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:29 - ಕನ್ನಡ ಸಮಕಾಲಿಕ ಅನುವಾದ

29 ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣ ದಿಕ್ಕುಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಊಟಕ್ಕೆ ಕೂಡ್ರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜನರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣದಿಕ್ಕುಗಳಿಂದ ಬರುವರು. ಅವರು ದೇವರ ರಾಜ್ಯದಲ್ಲಿ ಊಟಕ್ಕೆ ಕುಳಿತುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ದಿಸ್ ಉಗಾವ್ತಲ್ಯಾ ಅನಿ, ದಿಸ್ ಬುಡ್ತಲ್ಯಾ ದಿಕ್ಕಾಕ್ನಾ, ಅನಿ ಉತ್ತರ್ ಅನಿ ದಕ್ಷಿನ್ ದಿಕ್ಕಾಕ್ನಾ ಲೊಕಾ ಯೆತ್ಯಾತ್, ಅನಿ ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:29
14 ತಿಳಿವುಗಳ ಹೋಲಿಕೆ  

ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು