Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:34 - ಕನ್ನಡ ಸಮಕಾಲಿಕ ಅನುವಾದ

34 “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:34
46 ತಿಳಿವುಗಳ ಹೋಲಿಕೆ  

ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.


ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.


ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.


ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.


ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.


ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”


ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.


“ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.


ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.


“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು