Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:8 - ಕನ್ನಡ ಸಮಕಾಲಿಕ ಅನುವಾದ

8 “ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ತೋಟಮಾಡುವವನು - ಅಯ್ಯಾ, ಈ ವರುಷವೂ ಇದನ್ನು ಬಿಡು; ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಆ ಸೇವಕನು, ‘ಯಜಮಾನನೇ, ಇನ್ನೊಂದು ವರ್ಷ ತಾಳಿಕೊ. ಅದು ಫಲವನ್ನು ಕೊಡಬಹುದು. ಅದರ ಸುತ್ತಲೂ ಅಗೆದು ಸ್ವಲ್ಪ ರಸಗೊಬ್ಬರವನ್ನು ಹಾಕುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ, ತ್ಯಾ ಕಾಮ್ ಕರ್‍ತಲ್ಯಾನ್, “ಸಾವ್ಕಾರ್, ತೊಡ್ತಲೆ ನಕ್ಕೊ ರಾಂವ್ದಿತ್; ಮಿಯಾ ತೆಚ್ಯಾ ಮುಳಾತ್ ಕೊಚುನ್, ತೆಕಾ ಗೊಬರ್ ಘಾಲ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:8
17 ತಿಳಿವುಗಳ ಹೋಲಿಕೆ  

ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.


ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”


ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು