Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:17 - ಕನ್ನಡ ಸಮಕಾಲಿಕ ಅನುವಾದ

17 “ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ‘ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಆಕ್ರಿಕ್, ತೆಕಾ ಅರು ಯೆಲಿ, ಅನಿ “ಮಾಜ್ಯಾ ಬಾಬಾಚೆ ಘರಾತ್, ಸಗ್ಳಿ ಆಳಾ, ಜೆವ್ನ್-ಖಾವ್ನ್ ಹುರಿ ಸರ್ಕೆ, ಮಾಜ್ಯಾ ಬಾಬಾಕ್ಡೆ ಹಾಯ್, ಅನಿ ಮಿಯಾ ಹಿತ್ತೆ, ಭುಕೆನ್ ಮರುಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:17
19 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.


ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.


ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.


ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.


ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.


ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’


ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.


ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು