Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:27 - ಕನ್ನಡ ಸಮಕಾಲಿಕ ಅನುವಾದ

27 ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಳು ಅವನಿಗೆ, ‘ನಿನ್ನ ತಮ್ಮ ಬಂದಿದ್ದಾನೆ. ಇವನು ಸುರಕ್ಷಿತನಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಳು ಅವನಿಗೆ - ನಿನ್ನ ತಮ್ಮ ಬಂದಿದ್ದಾನೆ; ಇವನು ಸುರಕ್ಷಿತವಾಗಿ ಬಂದದ್ದರಿಂದ ನಿನ್ನ ತಂದೆಯು ಆ ಕೊಬ್ಬಿಸಿದ ಕರುವನ್ನು ಕೊಯ್ಸಿದ್ದಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಸೇವಕನು, ‘ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತ್ಯಾ ಆಳಾನ್ ತೆಕಾ “ತುಜೊ ಭಾವ್ ಪರ್ತುನ್ ಘರಾಕ್ ಯೆಲಾ, ಅನಿ ತುಜ್ಯಾ ಬಾಬಾನ್ ತೆಚೆಸಾಟ್ನಿ ಎಕ್ ಬರೊ ಪುಟ್ಪುಟಿತ್ ಪಾಡ್ಕು ಮಾರುಕ್ ಲಾವ್ಲ್ಯಾನಾಯ್, ತುಜೊ ಭಾವ್ ಸುರಕ್ಷಿತ್ ಪರ್ತುನ್ ಯೆಲಾ ಮನುನ್. ಹ್ಯೊ ಅವಾಜ್ ಹೊವ್ಲಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:27
8 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.


ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.


ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,


“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.


ಸೇವಕರಲ್ಲಿ ಒಬ್ಬನನ್ನು ಕರೆದು, ‘ಇವುಗಳು ಏನು?’ ಎಂದು ಕೇಳಿದನು.


“ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು