Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:28 - ಕನ್ನಡ ಸಮಕಾಲಿಕ ಅನುವಾದ

28 “ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದನ್ನು ಕೇಳಿ ಅವನಿಗೆ ಸಿಟ್ಟುಬಂದು ಒಳಕ್ಕೆ ಹೋಗಲೊಲ್ಲದೆ ಇದ್ದನು. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆಗ ಹಿರಿಯ ಮಗನು ಕೋಪಗೊಂಡು ಔತಣಕೂಟಕ್ಕೆ ಹೋಗಲಿಲ್ಲ. ಆಗ ಅವನ ತಂದೆ ಹೊರಗೆ ಬಂದು ಅವನನ್ನು ಒಳಗೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ಥೊರ್‍ಲ್ಯಾ ಭಾವಾಕ್, ಲೈ ರಾಗ್ ಯೆಲೊ, ರಾಗಾನ್ ತೊ, ಘರಾತ್ ಭುತ್ತುರ್ ಜಾವ್ಕುಚ್‍ನಾ. ತೆಚೆಸಾಟ್ನಿ, ತೆಚೊ ಬಾಬಾಚ್‍ ಘರಾತ್ನಾ ಭಾಯ್ರ್ ಯೆಲೊ, ಅನಿ ತೆಕಾ ಘರಾತ್ ಭುತ್ತುರ್ ಬಲ್ವುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:28
25 ತಿಳಿವುಗಳ ಹೋಲಿಕೆ  

ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.


ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.


ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.


ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ,


ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.


ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.


ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.


ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.


ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು