Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:5 - ಕನ್ನಡ ಸಮಕಾಲಿಕ ಅನುವಾದ

5 ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಿಕ್ಕಿದ ಮೇಲೆ ಅವನು ಸಂತೋಷಪಡುತ್ತಾ ಅದನ್ನು ತನ್ನ ಹೆಗಲಿನ ಮೇಲೆ ಇಟ್ಟುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಆ ಕುರಿಯನ್ನು ಕಂಡುಕೊಂಡಾಗ ಬಹು ಸಂತೋಷಪಡುವನು. ಅವನು ಆ ಕುರಿಯನ್ನು ತನ್ನ ಮನೆಗೆ ಹೊತ್ತುಕೊಂಡು ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆ ಗಾವಲ್ಲ್ಯಾ ತನ್ನಾ, ತೆಕಾ ಲೈ ಕುಶಿ ಹೊತಾ, ತಸೆ ಮನುನ್ ತೊ ತೆಕಾ ಅಪ್ನಾಚ್ಯಾ ಖಾಂಜ್ಯಾರ್ ಥವ್ನ್ ಘೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:5
31 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.


ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.


ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.


ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.


ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.


“ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ?


ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು