Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:9 - ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಫಿಡೆ ಜೆಜುನ್ “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ; ಜಗಾತ್ ತುಮಿ ತುಮ್ಚ್ಯಾಚ್ ಸಾಟ್ನಿ ಮನುನ್, ತುಮ್ಚ್ಯಾ ಅನ್ನ್ಯಾಯಾಚ್ಯಾ ಸಾವ್ಕಾರ್‍ಕಿನ್ ದೊಸ್ತಿಯಾ ಕಮ್ವುನ್ ಘೆವಾ, ಅಶೆ ಹ್ಯಾ ಜಗಾನ್ ತುಮ್ಕಾ ಸೊಡುನ್ ದಿಲ್ಲ್ಯಾ ತನ್ನಾ ತುಮ್ಕಾ ಕನ್ನಾಚ್ ಮರಾನ್ ನಸ್ತಾನಾ ರ್‍ಹಾತಲ್ಯಾ ಘರಾತ್ ಬಲ್ವುನ್ ಘೆವ್ನ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:9
28 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.


“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.


ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು