Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:22 - ಕನ್ನಡ ಸಮಕಾಲಿಕ ಅನುವಾದ

22 ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಒಂದು ಕಾಲ ಬರುತ್ತದೆ, ಅದರಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ತೆನಿ ಶಿಸಾಕ್ನಿ, ಎಕ್ ಎಳ್ ಯೆತಾ, ಮಾನ್ಸಾಚೊ ಲೆಕ್ ಯೆತಲೆ ಹ್ಯಾ ದಿಸಾತ್ನಿ ಅಮಿ ಬಗ್ತಾಂವ್, ಮನುನ್ ತುಮಿ ಯವ್ಜುನ್ ಘೆವ್ನ್ ರ್‍ಹಾತ್ಯಾಶಿ, ಖರೆ, ತೊ ದಿಸ್ ತುಮ್ಕಾ ಬಗುಕ್ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:22
11 ತಿಳಿವುಗಳ ಹೋಲಿಕೆ  

ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.


ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.


“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು