Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:1 - ಕನ್ನಡ ಸಮಕಾಲಿಕ ಅನುವಾದ

1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬುದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ, ಕನ್ನಾಬಿ ಕಂಟಾಳಿನಸ್ತನಾ ಮಾಗ್ನಿ ಕರುನ್ಗೆತ್ ರ್‍ಹಾತಲೆ ಶಿಕ್ವುಸಾಟ್ನಿ ಮನುನ್, ಹಿ ಕಾನಿ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:1
26 ತಿಳಿವುಗಳ ಹೋಲಿಕೆ  

ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ. ನಿಮಗೆ ದಿನವೆಲ್ಲಾ ಮೊರೆಯಿಡುತ್ತೇನೆ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.


ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.


ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.


ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.


ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.


ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು