Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:7 - ಕನ್ನಡ ಸಮಕಾಲಿಕ ಅನುವಾದ

7 ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತರ್ ಅತ್ತಾ, ದೆವ್ ಅಪ್ನಾಕ್ಡೆ ದಿಸ್ -ರಾತ್ ಮಾಗ್ತಲ್ಯಾ ಅಪ್ನಾಚ್ಯಾ ಲೊಕಾಕ್ನಿ ನ್ಯಾಯ್ ಕರುನ್ ದಿ ನಾ ಕಾಯ್? ತೊ ಲಗ್ಗುನಾಚ್ ತೆಂಕಾ ತೆನಿ ಮಾಗಲ್ಲೆ ದಿ,ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:7
31 ತಿಳಿವುಗಳ ಹೋಲಿಕೆ  

ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.


ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.


ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.


ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.


ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.


ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?


“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು