Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:1 - ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಗಸ್ತುಸ್ ಕೈಸರಾಚ್ಯಾ ಕಾಲಾತ್ ಸಗ್ಳ್ಯಾ ರೊಮಾಚ್ಯಾ ರಾಜಾಚ್ಯಾ ಲೊಕಾಂಚಿ ಮೆಜ್ನಿ ಕರುಚಿ ಮನುನ್ ಹುಕುಮ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:1
13 ತಿಳಿವುಗಳ ಹೋಲಿಕೆ  

ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.


ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು.


ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.


ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.


ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.


ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.


ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು