Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:27 - ಕನ್ನಡ ಸಮಕಾಲಿಕ ಅನುವಾದ

27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ಪೊರಾಕ್ ದೆವಾಕ್ ಭೆಟ್ವುಕ್ ಮನುನ್, ತೆಚೆ ಬಾಯ್-ಬಾಬಾ ದೆವಾಚ್ಯಾ ಗುಡಿತ್ ಭೆಟ್ವುಕ್ ಜೆಜುಕ್ ಘೆವ್ನ್ ಯೆಲ್ಲ್ಯಾನಿ. ತನ್ನಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ಸಿಮಿಯಾವ್ ದೆವಾಚ್ಯಾ ಗುಡಿಕ್ಡೆ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:27
15 ತಿಳಿವುಗಳ ಹೋಲಿಕೆ  

ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.


ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.


ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.


ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.


ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.


ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,


ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.


ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.


ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು,


ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು