Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:14 - ಕನ್ನಡ ಸಮಕಾಲಿಕ ಅನುವಾದ

14 “ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ, ತ್ಯಾ ಲೆಕಾಕ್ ಬಗಟಲ್ಲೆಚ್ ತೆ ಗುತ್ಕ್ಯಾಚೆ ಎಕಾಮೆಕಾಕ್ನಿ “ಹ್ಯೊ ಹ್ಯಾ ಮಳ್ಯಾಚ್ಯಾ ಮಾಲ್ಕಾಚೊ ಲೆಕ್, ಯೆವಾ ಹೆಕಾ ಜಿವಾನಿಚ್ ಮಾರುಂವ್ವಾ, ಅನಿ ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:14
20 ತಿಳಿವುಗಳ ಹೋಲಿಕೆ  

ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.


ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.


ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.


ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.


ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.


ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.


ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.


“ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.


ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು