Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:38 - ಕನ್ನಡ ಸಮಕಾಲಿಕ ಅನುವಾದ

38 ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನಿಗೆ ಎಲ್ಲರೂ ಜೀವಿಸುವವರೇ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಝಿತ್ತ್ಯಾಂಚೊ ದೆವ್ ತೊ, ಮರಲ್ಲ್ಯಾಂಚೊ ನ್ಹಯ್ , ತೆಕಾ ಸಗ್ಳೆ ಜಾನಾ ಝಿತ್ತೆಚ್ ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:38
18 ತಿಳಿವುಗಳ ಹೋಲಿಕೆ  

ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.


ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.


ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು