Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:6 - ಕನ್ನಡ ಸಮಕಾಲಿಕ ಅನುವಾದ

6 ‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮನುಷ್ಯರಿಂದ ಬಂತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗಟ್ಲ್ಯಾರ್, ಹಿತ್ತೆ ಹೊತ್ತಿ ಸಗ್ಳಿ ಲೊಕಾ ಅಮ್ಕಾ ಗುಂಡ್ಯಾನಿ ಮಾರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಸಗ್ಳೆ ತೊ ಎಕ್ ಪ್ರವಾದಿ, ಮನುನ್ ಮಾನ್ತ್ಯಾತ್” ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:6
13 ತಿಳಿವುಗಳ ಹೋಲಿಕೆ  

‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.


ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.


“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.


ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.


ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.


ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.


ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.


ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.


ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.


“ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು