Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:9 - ಕನ್ನಡ ಸಮಕಾಲಿಕ ಅನುವಾದ

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:9
15 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.


“ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.


ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.


ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.


ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು