Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ದಿನಗಳಲ್ಲಿ ಬಸುರಿಯರಿಗೂ ಮೊಲೆಕೂಸಿರುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತ್ಯಾ ದಿಸಾತ್ನಿ ಗರ್‍ವಾರ್ ಹೊತ್ತ್ಯಾ ಬಾಯ್ಕೊಮನ್ಸಿಂಚಿ, ಅನಿ ಬಾರಿಕ್ಲಿ ಪೊರಾ ಹೊತ್ತ್ಯಾ ಬಾಯ್ಕೊಮನ್ಸಿಂಚಿ ಗತ್ ಕಾಯ್ ಸಾಂಗು! ಹ್ಯಾ ಜಿಮ್ನಿರ್ ಲೈ ಮೊಟೊ ಸಂಕಟ್ ಯೆವ್ನ್ ಪಾವ್ತಾ, ಅನಿ ದೆವಾಚಿ ಶಿಕ್ಷಾ ಹ್ಯಾ ಲೊಕಾಂಚ್ಯಾ ವರ್‍ತಿ ಯೆವ್ನ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:23
18 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.


ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.


ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?


ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.


ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.


ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.


“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.


ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು