Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:34 - ಕನ್ನಡ ಸಮಕಾಲಿಕ ಅನುವಾದ

34 “ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಉಶಾರ್ಕಿ ರ್‍ಹಾವಾ! ಸನಾ ಕರ್‍ತಲ್ಯಾತ್, ಅನಿ ನಿಶೆತ್, ಅನಿ ಹ್ಯಾ ಬಾಳ್ವಿಚ್ಯಾ ಯವ್ಜನ್ಯಾತ್ನಿಚ್ ರ್‍ಹಾವ್ನಕಾಶಿ, ತೊ ದಿಸ್ ಎಗ್ದಮ್ ಅಚಾನಕ್ ತುಮ್ಚೆ ವರ್‍ತಿ ಯೆಯ್ಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:34
37 ತಿಳಿವುಗಳ ಹೋಲಿಕೆ  

ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.


ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.


ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.


ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.


ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.


ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು.


ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.


ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು