Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು - ನೀವು ಇವುಗಳನ್ನು ನೋಡುತ್ತೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿವಸಗಳು ಬರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎಕ್ ಎಳ್ ಯೆತಾ, ಅನಿ ಹೆ ತುಮಿ ಬಗುಲ್ಯಾಸಿ ತೆ ಎಕ್ ಸೈತ್ ಗುಂಡೊ ಥೈ ನಸ್ತಾನಾ, ಸಗ್ಳೆ ಕೊಸ್ಳುನ್ ಘಾಲುನ್ ಹೊತಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:6
20 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.


ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಆಗ ಅವರು ಯೇಸುವಿಗೆ, “ಬೋಧಕರೇ, ಇವುಗಳು ಯಾವಾಗ ಆಗುವುವು? ಇವುಗಳು ಸಂಭವಿಸುವುದಕ್ಕಿರುವಾಗ ಯಾವ ಸೂಚನೆ ಇರುವುದು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು