Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:17 - ಕನ್ನಡ ಸಮಕಾಲಿಕ ಅನುವಾದ

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಜೆಜುನ್ ಎಕ್ ವಾಯ್ನಾನ್ ಭರಲ್ಲೆ ಆಯ್ದಾನ್ ಘೆಟ್ಲ್ಯಾನ್, ಅನಿ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ “ಹೆ ಘೆವಾ, ಅನಿ ತುಮ್ಚ್ಯಾ ಮದ್ದಿ ವಾಟುನ್ ಘೆವ್ನ್ ಫಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:17
15 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.


ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.


ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.


ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.


ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.


ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.


ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.


ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.


ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.


ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು