Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:18 - ಕನ್ನಡ ಸಮಕಾಲಿಕ ಅನುವಾದ

18 ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಸಾಂಗ್ತಾ ಅತ್ತಾಚ್ಯಾನ್, ದೆವಾಚೆ ರಾಜ್ ಯೆಯ್ ಪತರ್ ಮಿಯಾ ಅನಿ ಹಿ ವಾಯ್ನ್ ಫಿ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:18
22 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.


ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಅದೇ ಪ್ರಕಾರ, ಇವೆಲ್ಲ ಸಂಭವಿಸುವುದನ್ನು ನೀವು ಕಾಣುವಾಗ, ದೇವರ ರಾಜ್ಯ ಸಮೀಪಿಸಿತೆಂದು ತಿಳಿದುಕೊಳ್ಳಿರಿ.


“ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


ಆಗ ಅವರು ಯೇಸುವಿಗೆ ರಕ್ತಬೋಳ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ.


ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.


ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.


ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.


ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು