Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:36 - ಕನ್ನಡ ಸಮಕಾಲಿಕ ಅನುವಾದ

36 ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತನ್ನಾ ಜೆಜುನ್ ಖರೆ ಅತ್ತಾ, ಜೆ ಕೊನಾಕ್ಡೆ ಪೈಶಾಂಚಿ ಪಿಸ್ವಿ ನಾ ಹೊಲ್ಯಾರ್ ಕಾಯ್ಬಿ ಸಾಮಾನ್ ಘೆವ್ನ್ ಜಾತಲಿ ಪಿಸ್ವಿ ಹಾಯ್, ತೊ ತಿ ಘೆಂವ್ದಿ, ಅನಿ ಕೊನಾಕ್ಡೆ ಕೊಯ್ತೊ ನಾ, ತೊ ಅಪ್ನಾಚಿ ಅಂಗಿ ಇಕುನ್ ಎಕ್ ಕೊಯ್ತೊ ಇಕಾತ್ ಘೆಂವ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:36
10 ತಿಳಿವುಗಳ ಹೋಲಿಕೆ  

ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.


ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.


ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.


ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು