Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:31 - ಕನ್ನಡ ಸಮಕಾಲಿಕ ಅನುವಾದ

31 ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಜೀವನ ಸುಖಕರವಾಗಿರುವಾಗ ಜನರು ಈ ರೀತಿ ವರ್ತಿಸಿದರೆ, ಜೀವನ ಕಷ್ಟಕರವಾದಾಗ ಏನು ಮಾಡುವರು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ಅಸ್ಲೆ ಸಗ್ಳೆ ಎಕ್ ಹಿರ್‍ವೆ ಹೊತ್ತ್ಯಾ ಝಾಡಾಕುಚ್ ಕರ್ಲ್ಯಾರ್ , ವಾಳ್ಕ್ಯಾ ಝಾಡಾಚಿ ಗತ್ ಕಾಯ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:31
13 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.


ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.


ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು