Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:40 - ಕನ್ನಡ ಸಮಕಾಲಿಕ ಅನುವಾದ

40 ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದರೆ ಇನ್ನೊಬ್ಬ ದುಷ್ಕರ್ಮಿಯು ಅವನನ್ನು ಗದರಿಸಿ, “ನೀನು ದೇವರಿಗೆ ಹೆದರಬೇಕು! ನಾವೆಲ್ಲರೂ ಬೇಗನೆ ಸಾಯುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತನ್ನಾ ಅನಿ ಎಕ್ಲ್ಯಾನ್ ತೆಕಾ “ತುಕಾಬಿ ತೆಕಾ ಗಾವಲ್ಲಿಚ್ ಶಿಕ್ಷಾ ಗಾವ್ಲಾ, ತುಕಾ ಉಲ್ಲೆಬಿ ದೆವಾಚೆ ಭಿಂಯೆ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:40
12 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು,” ಎಂದು ಯೇಸುವನ್ನು ದೂಷಿಸಿದನು.


ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.


“ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು