Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:7 - ಕನ್ನಡ ಸಮಕಾಲಿಕ ಅನುವಾದ

7 ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಹೆರೋದನ ಅಧಿಕಾರಕ್ಕೊಳಪಟ್ಟವನೆಂದು ಪಿಲಾತನಿಗೆ ತಿಳಿಯಿತು. ಆ ಸಮಯದಲ್ಲಿ ಹೆರೋದನು ಜೆರುಸಲೇಮಿನಲ್ಲಿದ್ದನು. ಆದ್ದರಿಂದ ಪಿಲಾತನು ಯೇಸುವನ್ನು ಅವನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜೆಜು ಹೆರೊದಾಚ್ಯಾ ಅದಿಕಾರಾತ್ ಹೊತ್ತ್ಯಾ ಜಾಗ್ಯಾವೈಲೊ ಮನುನ್ ಕಳಲ್ಲ್ಯಾ ತನ್ನಾ, ಪಿಲಾತಾನ್ ಜೆಜುಕ್ ಹೆರೊದಾಕ್ಡೆ ಧಾಡುನ್ ದಿಲ್ಯಾನ್. ತನ್ನಾ ಹೆರೊದ್ ಜೆರುಜಲೆಮಾತುಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:7
9 ತಿಳಿವುಗಳ ಹೋಲಿಕೆ  

ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,


ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.


ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,


ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.


ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.


ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.


ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.


ಪಿಲಾತನು ಗಲಿಲಾಯದ ವಿಷಯವಾಗಿ ಕೇಳಿದಾಗ, “ಈ ಮನುಷ್ಯನು ಗಲಿಲಾಯದವನೋ?” ಎಂದು ವಿಚಾರಿಸಿದನು.


ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು