Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:19 - ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಅವರಿಗೆ, “ನೀವು ಯಾವುದರ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರು ಆತನಿಗೆ, “ನಜರೇತಿನ ಯೇಸುವಿನ ಬಗ್ಗೆ. ಆತನು ದೇವರ ಮತ್ತು ಮನುಷ್ಯರ ದೃಷ್ಟಿಯಲ್ಲಿ ಮಹಾಪ್ರವಾದಿಯಾಗಿದ್ದನು. ಆತನು ಅನೇಕ ಸಂಗತಿಗಳನ್ನು ಹೇಳಿದನು ಮತ್ತು ಅದ್ಭುತಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೆನಿ,“ ಕಾಯ್ ಹೊಲೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ನಜರೆತಾಚ್ಯಾ ಜೆಜುಕ್ ಹೊಲ್ಲೆ.” ಮನುನ್ ಜಬಾಬ್ ದಿಲ್ಯಾನಿ. “ದೆವಾನ್ ಅನಿ ಮಾನ್ಸಾನಿ ಹ್ಯೊ ಮಾನುಸ್ ಎಕ್ ಪ್ರವಾದಿ ಮನುನ್ ಮಾನಲ್ಲೊ ಹೊತ್ತೊ, ಸಗ್ಳ್ಯಾ ರಿತಿನ್ ತೆಕಾ ಸಗ್ಳೊ ಬಳ್ ಹೊತ್ತೊ, ತೆನಿ ಅಪ್ನಿ ಸಾಂಗ್ಲ್ಯಾನ್ ಅನಿ ತಸೆಚ್ ಕರುನ್ ದಾಕ್ವುಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:19
13 ತಿಳಿವುಗಳ ಹೋಲಿಕೆ  

ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.


ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.


ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು