Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:27 - ಕನ್ನಡ ಸಮಕಾಲಿಕ ಅನುವಾದ

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:27
50 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.


ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.


“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.


“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.


ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”


ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್


ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.


ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.


ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.


ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು