Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:2 - ಕನ್ನಡ ಸಮಕಾಲಿಕ ಅನುವಾದ

2 ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಚಾಳಿಸ್ ದಿಸಾ ಗಿರೊ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್‍ ಬಗಟ್ಲ್ಯಾನ್.ತ್ಯಾ ಚಾಳಿಸ್ ದಿಸಾತ್ನಿ ಜೆಜುನ್ ಪೊಟಾಕ್ ಕಾಯ್ಬಿ ಖಯ್‍ನಸಲ್ಲ್ಯಾನ್ ಚಾಳಿಸ್ ದಿಸಾ ಸರಲ್ಲ್ಯಾ ತನ್ನಾ ತೆಕಾ ಲೈ ಭುಕ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:2
16 ತಿಳಿವುಗಳ ಹೋಲಿಕೆ  

ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.


ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.


ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.


ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.


ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.


ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.


ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.


ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.


ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.


ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು