Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:22 - ಕನ್ನಡ ಸಮಕಾಲಿಕ ಅನುವಾದ

22 ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಈ ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಂಕಾ ಸಗ್ಳ್ಯಾಕ್ನಿ ಹೆ ಲೈ ಬರೆ ದಿಸ್ಲೆ, ಅನಿ ಎವ್ಡ್ಯಾ ಬುದ್ವಂತ್ಕಿನ್ ಬೊಲಲ್ಲ್ಯಾ ಬರ್‍ಯಾ ಗೊಸ್ಟಿಯಾ ಆಯ್ಕುನ್, ತೆನಿ ಅಜಾಪ್ ಹೊಲೆ. ತನ್ನಾ ತೆನಿ “ಹ್ಯೊ ಜುಜೆಚೊ ಲೆಕ್ ನ್ಹಯ್?” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:22
20 ತಿಳಿವುಗಳ ಹೋಲಿಕೆ  

“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.


ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.


ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.


ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.


ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.


ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.


ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.


ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.


ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.


ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು