Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:1 - ಕನ್ನಡ ಸಮಕಾಲಿಕ ಅನುವಾದ

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಗೆನಜರೆತ್ ಮನ್ತಲ್ಯಾ ಸಮುಂದರಾಚ್ಯಾ ದಂಡೆಕ್ ಇಬೆ ಹೊತ್ತೊ. ದೆವಾಚಿ ಗೊಸ್ಟಿಯಾ ಆಯ್ಕುಕ್ ಲೊಕಾ ಢಕ್ಲಾ-ಢಕ್ಲಿ ಕರುನ್ ಘೆಯ್ತ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:1
21 ತಿಳಿವುಗಳ ಹೋಲಿಕೆ  

ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.


ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.


ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.


ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.


ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.


ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.


ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.


ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.


ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.


ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.


ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.


ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.


ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.


ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.


ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು