Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:26 - ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತೆನಿ ಸಗ್ಳೆ ಜಾನಾ ಎಗ್ದಮ್ ಅಜಾಪ್ ಹೊಲೆ, ಅನಿ “ಕಸ್ಲೆ ಮೊಟೆ ವಿಚಿತ್ರ್ ಅಮಿ ಬಗಟ್ಲ್ಯಾವ್” ಮನುನ್ಗೆತ್ ಭಿಂಯಾನ್ ತೆನಿ ದೆವಾಕ್ ಹೊಗಳ್ಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:26
13 ತಿಳಿವುಗಳ ಹೋಲಿಕೆ  

ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.


ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.


ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.


ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.


ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು