Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:12 - ಕನ್ನಡ ಸಮಕಾಲಿಕ ಅನುವಾದ

12 ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಎಕ್ ದಿಸ್ ಜೆಜು ಮಾಗ್ನಿ ಕರುಕ್ ಮನುನ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೆನಿ ದೆವಾಕ್ಡೆ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:12
23 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.


ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.


ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.


ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.


ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.


ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.


ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.


ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ


ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.


ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.


ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.


ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು