Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:47 - ಕನ್ನಡ ಸಮಕಾಲಿಕ ಅನುವಾದ

47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕೊನ್ಬಿ ಎಕ್ಲೊ ಮಾಜ್ಯಾ ವಾಂಗ್ಡಾ ಯೆತಾ ಅನಿ ಮಿಯಾ ಸಾಂಗಟಲ್ಲೆ ಆಯಿಕ್ತಾ ಅನಿ ಮಾಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊತಾ ತೊ ಕೊನ್ ಮನುನ್ ಮಿಯಾ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:47
30 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.


ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?


ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು