Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜೆಜುಕ್ ತೆನಿ ಯವಜಲ್ಲೆ ಕಳ್ಳೆ, ಅನಿ ತೆನಿ ತ್ಯಾ ಮಾನ್ಸಾಕ್ “ಉಟ್, ಅನಿ ಹಿಕ್ಡಿ ಫಿಡೆ ಯೆ”, ಮಟ್ಲ್ಯಾನ್, ತೊ ಮಾನುಸ್ ಉಟ್ಲೊ, ಅನಿ ಫಿಡೆ ಯೆವ್ನ್ ಇಬೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:8
19 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?


ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.


ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.


ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.


ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು