Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಬಗುನ್ ಸಗ್ಳೆಜಾನ್ ಭಿಂವ್ನ್ ಗೆಲೆ ಅನಿ ತೆನಿ ದೆವಾಕ್ ಹೊಗ್ಳುನ್ಗೆತ್. “ಎಕ್ ಮೊಟೊ ಪ್ರವಾದಿ ಅಮ್ಚ್ಯಾ ಮದ್ದಿ ಯೆಲಾ! ದೆವ್ ಅಪ್ನಾಚ್ಯಾ ಲೊಕಾಕ್ನಿ ಹುರ್ವುನ್ ಘೆವ್ಕ್ ಮನುನ್ ಯೆಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:16
31 ತಿಳಿವುಗಳ ಹೋಲಿಕೆ  

ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.


ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.


ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.


ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.


ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.


ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.


ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.


ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.


ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.


ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.


ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.


ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.


ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.


“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು